ಭಾರತದಲ್ಲಿ labour card ಗಳ ವಿಧಗಳು
- ಸಾಮಾಜಿಕ ಕಾರ್ಡ್
- ಬಿಲ್ಡಿಂಗ್ ಕಾರ್ಡ್
ಸಾಮಾಜಿಕ ಕಾರ್ಡ್: ಕೃಷಿ, ಕೃಷಿ ಮತ್ತು ಕಟ್ಟಡೇತರ ಚಟುವಟಿಕೆಗಳನ್ನು ನಿರ್ವಹಿಸುವ ಕಾರ್ಮಿಕರು ಈ ಕಾರ್ಡ್ಗೆ ಅರ್ಹರಾಗಿರುತ್ತಾರೆ.
ಬಿಲ್ಡಿಂಗ್ ಕಾರ್ಡ್: ಈ ಕಾರ್ಡ್ ಪರವಾನಗಿ ಪಡೆದ ಗುತ್ತಿಗೆದಾರರ ಅಡಿಯಲ್ಲಿ ಕೆಲಸ ಮಾಡುತ್ತಿರುವವರು ಈ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು.
ಪ್ರಯೋಜನ?
- ಮಕ್ಕಳಿಗೆ ಉಚಿತ ಶಿಕ್ಷಣ (Free Education to Children’s )
- ಉಚಿತವಾಗಿ ಜೀವ ವಿಮೆ ಪ್ರಯೋಜನಗಳು ( Life insurance benefits for free)
- ದೊಡ್ಡ ಅಪಘಾತ ಅಥವಾ ದೊಡ್ಡ ಅಪಘಾತದ ಸಂದರ್ಭದಲ್ಲಿ ಸಾವು ಅಥವಾ ಗಾಯದ ಸಂದರ್ಭದಲ್ಲಿ ಸಹಾಯ
- ಉಚಿತ ಆರೋಗ್ಯ ವಿಮೆ ಪ್ರಯೋಜನ (Free Health Insurance Benefit)
- ಗರ್ಭಾವಸ್ಥೆಯಲ್ಲಿ ಮತ್ತು ಮಗುವಿನ ಹೆರಿಗೆಯ ಸಮಯದಲ್ಲಿ ಸಹಾಯ
- ಸಲಿಕೆ ಮತ್ತು ಇತರ ಕೆಲಸದ ಉಪಕರಣಗಳನ್ನು ಖರೀದಿಸಲು ಹಣಕಾಸಿನ ಬೆಂಬಲ
- ಮಗಳ ಮದುವೆಯ ಸಮಯದಲ್ಲಿ ಪ್ರಯೋಜನಗಳು
- ಸೈಕಲ್ ಸಹಾಯವನ್ನು ಖರೀದಿಸುವುದು
- ಮಕ್ಕಳಿಗಾಗಿ ವಿದ್ಯಾರ್ಥಿವೇತನ (Scholarship for children)
- ಕೌಶಲ್ಯಗಳ ಉನ್ನತೀಕರಣಕ್ಕೆ ಸಹಾಯ
- ನಿರ್ಮಾಣ್ ಶ್ರಮಿಕ ಸುಲಭ್ ಆವಾಸ್ ಯೋಜನೆ
- ಗೃಹ ಸಾಲ ಸೌಲಭ್ಯ
labour cardಗೆ ಬೇಕಾದ ಅಗತ್ಯವಾದ ದಾಖಲೆಗಳು
- ಆಧಾರ್ ಕಾರ್ಡ್
- Passport Size ಫೋಟೋ
- ಬ್ಯಾಂಕ್ ಖಾತೆ ಸಂಖ್ಯೆ
- ಇ-ಮೇಲ್ ಐಡಿ
- ಮೊಬೈಲ್ ನಂಬರ
- ನಿಮ್ಮ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಸಂಖ್ಯೆ
- ಪಡಿತರ ಚೀಟಿ (ಐಚ್ಛಿಕ)
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯದ ಅಧಿಕೃತ ಕಾರ್ಮಿಕ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ. ನಂತರ, ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿ ಮತ್ತು ಸಂಬಂಧಿತ ಕಾರ್ಮಿಕ ಇಲಾಖೆಯ ವೆಬ್ಸೈಟ್ ಅನ್ನು ಕ್ಲಿಕ್ ಮಾಡಿ. ಮುಂದೆ, ಹೊಸ ಲೇಬರ್ ಕಾರ್ಡ್ ನೋಂದಣಿಗಾಗಿ ಹುಡುಕಿ. ಈಗ ಡ್ರಾಪ್-ಡೌನ್ನಿಂದ ನಿಮ್ಮ ಜಿಲ್ಲೆಯನ್ನು ಆಯ್ಕೆಮಾಡಿ. ಅದರ ನಂತರ, ನಿಮ್ಮ ಮೊದಲ ಹೆಸರು, ಕೊನೆಯ ಹೆಸರು, ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿಯನ್ನು ನಮೂದಿಸಿ. ನಿಮ್ಮ ಇ-ಮೇಲ್ ಮತ್ತು ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿ ಮತ್ತು ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿದ ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
labour cardಗಾಗಿ ಯಾರು ಅರ್ಜಿ ಸಲ್ಲಿಸಬಹುದು?
ಸಾಮಾನ್ಯವಾಗಿ ವರ್ಷಕ್ಕೆ 90 ದಿನ ಕೆಲಸ ಮಾಡುವವರನ್ನು ಈ ಯೋಜನೆಯಲ್ಲಿ ಸೇರಿಸಿಕೊಳ್ಳಬಹುದು. ಅವರು ತಮ್ಮ 90 ದಿನಗಳ ಪ್ರಮಾಣ ಪತ್ರಗಳ ಪಟ್ಟಿಯನ್ನು ಸಿದ್ಧಪಡಿಸುವ ಮೂಲಕ ಕಾರ್ಮಿಕ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು.
ಕಾರ್ಮಿಕ ಇಲಾಖೆ ಎಲ್ಲಾ ವಿದ್ಯಾರ್ಥಿಗಳಿಗೂ ಸಿಹಿಸುದ್ದಿಯನ್ನು ನೀಡಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು ಎಂದು ಈ ಯೋಜನೆಯನ್ನು ರೂಪಿಸಲಾಗಿದೆ. ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ಮತ್ತು ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕಲಿಕೆ ಭಾಗ್ಯ ಯೋಜನೆಯಲ್ಲಿ ನರ್ಸರಿಯಿಂದ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಸಹಾಯಧನ ಸಿಗಲಿದೆ ಎಂದು ನೋಡೋಣ. ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನರ್ಸರಿಯಿಂದ ಹಿಡಿದು ಕಾಲೇಜು ಮಟ್ಟದ ಉನ್ನತವಾದ ಶಿಕ್ಷಣ ಪಡೆಯಲು ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯಿಂದ 3 ಸಾವಿರ ರೂಪಾಯಿಂದ 55 ಸಾವಿರ ರೂಪಾಯಿಗಳವರೆಗೂ ಸಹಾಯಧನವನ್ನು ಪಡೆಯಬಹುದಾಗಿದೆ.ಈ ಯೋಜನೆಗೆ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು ಯಾವೆಲ್ಲಾ ದಾಖಲಾತಿಗಳನ್ನು ಹೊಂದಿರಬೇಕು ಎಂದರೆ,
- ವಿದ್ಯಾರ್ಥಿಯ ಪೋಷಕರು ಕಾರ್ಮಿಕ ಇಲಾಖೆಯಿಂದ ನೋಂದಣಿಯಾಗಿರುವ ಬಗ್ಗೆ ಸ್ಮಾರ್ಟ್ ಕಾರ್ಡ್ ಅಥವಾ ಕಾರ್ಮಿಕ ಗುರುತಿನ ಚೀಟಿ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು.
- ವಿದ್ಯಾರ್ಥಿಯ ಇತ್ತೀಚಿನ 2 ಪಾಸ್ಪೋರ್ಟ್ ಸೈಜಿನ ಫೋಟೋಗಳು.
- ವಿದ್ಯಾರ್ಥಿಯ ಅಂಕಪಟ್ಟಿ.
- ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಬಗ್ಗೆ ವ್ಯಾಸಂಗ ಪ್ರಮಾಣ ಪತ್ರ.ಈ ಎಲ್ಲಾ ದಾಖಲಾತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕಾಗುತ್ತದೆ. ಕಲಿಕೆ ಭಾಗ್ಯ ಯೋಜನೆಯಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳ ತಂದೆ, ತಾಯಿ ಅಥವಾ ಇತರೆ ಪೋಷಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಆಗಿರಬೇಕು. ಕಟ್ಟಡ ಕಾರ್ಮಿಕರ ಮಂಡಳಿಯಿಂದ labour office ನಲ್ಲಿ ನೋಂದಣಿಯಾಗಿರಬೇಕು.ಈ ನೋಂದಣಿ ಚಾಲ್ತಿಯಲ್ಲಿರಬೇಕು. ಅಂದರೆ ಕಾರ್ಮಿಕರ ಕಾರ್ಡ್ ಚಾಲ್ತಿಯಲ್ಲಿ ಇರಬೇಕು.ಕಲಿಕೆ ಭಾಗ್ಯ ಯೋಜನೆಯಲ್ಲಿ ಸಹಾಯಧನ ಪಡೆಯಲು ಇಚ್ಚಿಸುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಅಧಿಕೃತ ವೆಬ್ಸೈಟ್ ಲಿಂಕ್-https://serviceonline.gov.in/karnataka/